ಸಂಡೂರು: ತಾಲ್ಲೂಕಿನ ದೌಲತ್ಪುರ ಗ್ರಾಮಕ್ಕೆ ಬುಧವಾರದಿಂದ ಬಸ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿದ್ದಕ್ಕೆ ಗ್ರಾಮಸ್ಥರು, ಐಡಿಎಸ್ಒ ಸಂಘಟನೆಯ ಮುಖಂಡರು ಸಂತಸ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಎಐಡಿಎಸ್ಒ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ, ‘ಸಂಘಟನಾತ್ಮಕ ಹೋರಾಟದ ಫಲವಾಗಿ ಗ್ರಾಮಕ್ಕೆ ಬಸ್ ಸೌಲಭ್ಯ ದೊರಕಿತು. ಬಸ್ ಸೌಲಭ್ಯ ಒದಗಿಸಿದ್ದಕ್ಕೆ ಅಧಿಕಾರಿಗಳಿಗೆ ಅಭಿನಂದನೆಗಳು’ ಎಂದರು.
ಬಸ್ ಸೌಲಭ್ಯ ಒದಗಿಸಲು ಆಗ್ರಹಿಸಿ ಎಐಡಿಎಸ್ಒ ಹಾಗೂ ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷಗಳ ನೇತೃತ್ವದಲ್ಲಿ ಗ್ರಾಮದ ವಿದ್ಯಾರ್ಥಿಗಳು ಪಟ್ಟಣದ ಬಸ್ ಘಟಕದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದ್ದರು.