ಐಕ್ಯೂಎಸಿ ಸಂಚಾಲಕ ಡಾ.ಕೆ.ಕೆ. ಕಮಾನಿ ಮಾತನಾಡಿ, ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಹಿಂದಿನಿಂದಲೂ ಹೋರಾಟ ನಡೆಯುತ್ತಿದ್ದು, ಉದ್ಯೋಗಸ್ಥರು ನೀರಿಗಾಗಿ ಕೆಲಸ ಬಿಟ್ಟು ಅಲೆದಾಡುವ ಸ್ಥಿತಿ ನಿರ್ಮಾಣವಾದರೂ ಅಚ್ಚರಿ ಪಡಬೇಕಿಲ್ಲ. ಜನರಲ್ಲಿ ನೀರಿನ ಸಾಕ್ಷರತೆ ಹೆಚ್ಚಿಸಬೇಕು. ಮರುಬಳಕೆಗೆ ಮುಂದಾಗದಿದ್ದರೆ, ಮುಂದಿನ ದಿನಗಳಲ್ಲಿ ಬದುಕು ದುಸ್ತರವಾಗಲಿದೆ ಎಂದು ಎಚ್ಚರಿಕೆ ನೀಡಿದರು.