ಹಾನಗಲ್ ಜಿಲ್ಲಾಪಂಚಾಯ್ತಿ ವ್ಯಾಪ್ತಿ ಹಿರೇಕೆರೆಹಳ್ಳಿ, ರಾಯಾಪುರ, ಹಾನಗಲ್, ತುಮಕೂರ್ಲಹಳ್ಳಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಮಸ್ಯೆ ಉಲ್ಬಣಿಸುತ್ತಿದೆ. ರಾಯಾಪುರ ಪಂಚಾಯ್ತಿಯಲ್ಲಿ ಸಮಸ್ಯೆ ತೀವ್ರವಾಗಿದ್ದು, ಹಲವು ಪ್ರತಿಭಟನೆಗಳು ನಡೆದಿವೆ. ಆದರೆ ನಿಭಾಯಿಸಲು ಅನುದಾನವಿಲ್ಲದ ಕಾರಣ ಹೊಸ ಕೊಳವೆಬಾವಿ ಕೊರೆಸಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಮುಂಡ್ರಗಿ ನಾಗರಾಜ್ ಹೇಳಿದರು.