‘ನೀರಿನ ಅವಶ್ಯಕತೆ ಇಲ್ಲದ ವೇಳೆ ಅದು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು. ಭೂಮಿಯ ಮೇಲಿನ ಪ್ರತಿಯೊಂದು ಜೀವ ಸಂಕುಲಗಳಿಗೂ ಅದರ ಅವಶ್ಯಕತೆ ಇದೆ. ಸಾರ್ವಜನಿಕರಲ್ಲಿ ಸಂರಕ್ಷಣೆಯ ತಿಳಿವಳಿಕೆ ಮೂಡಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಬೇಕು. ಮುಂದಿನ ಪೀಳಿಗೆಗೆ ಉತ್ತಮ ಗಾಳಿ, ನೀರು, ಪರಿಸರವನ್ನು ಕೊಡುಗೆಯಾಗಿ ನೀಡಲು ಈಗಲೇ ಜಾಗೃತರಾಗಬೇಕಾದ ಅವಶ್ಯಕತೆ ಇದೆ’ ಎಂದು ಹೇಳಿದರು.