ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಬಗ್ಗೆ ರಾಜ್ಯದ ಶಿಫಾರಸನ್ನು ಕೇಂದ್ರ ಸರ್ಕಾರ ಪರಿಗಣಿಸುವುದು ಅಥವಾ ಬಿಡುವುದು ಬೇರೆ ವಿಚಾರ. ಆದರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಧರ್ಮ ಒಡೆಯುವ ಕೆಲಸಕ್ಕೆ ಕೈಹಾಕಿದ್ದು ಮಾತ್ರ ಖಂಡನೀಯ.
‘ಬಿಜೆಪಿಯವರದ್ದು ಧರ್ಮರಾಜಕಾರಣ’ ಎಂದು ಸಿದ್ದರಾಮಯ್ಯ ಹಲವು ಬಾರಿ ಟೀಕಿಸಿದ್ದಿದೆ. ಆದರೆ ಅವರೇ ಈಗ ವೋಟಿಗಾಗಿ ಧರ್ಮದ ವ್ಯಾಪಾರಕ್ಕೆ ಇಳಿದಿದ್ದಾರೆ. ಹಿಂದೂ ಧರ್ಮವನ್ನು ಒಡೆಯುವ ಮೂಲಕ ಸಿದ್ದರಾಮಯ್ಯ, ದೇಶದ ಅಖಂಡತೆಯನ್ನು ನಾಶಮಾಡಲು ಹೊರಟಿದ್ದಾರೆ. ಇದು ಧರ್ಮರಾಜಕಾರಣದ ಪರಮಾವಧಿ ಅಲ್ಲವೇ?