ನಾಲವಾರದಿಂದ ಬಳವಡ್ಗಿ ಗ್ರಾಮದ ಮೂಲಕ ವಾಡಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರು, ₹2.58 ಕೋಟಿ ವೆಚ್ಚದ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿದ್ದರು. ಆದರೆ, ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಅಪವಿತ್ರ ಮೈತ್ರಿಯಿಂದಾಗಿ ಡಾಂಬರು ರಸ್ತೆ ನಿರ್ಮಾಣವಾದ ಒಂದೇ ವರ್ಷದಲ್ಲಿ ಕಿತ್ತು ಹೋಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.