ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಆರೋಪಿಗೆ 9 ವರ್ಷ ಜೈಲು

Last Updated 24 ಮಾರ್ಚ್ 2018, 12:29 IST
ಅಕ್ಷರ ಗಾತ್ರ

ತುಮಕೂರು: ಹೂವು ಕೀಳುತ್ತಿದ್ದ ಮಹಿಳೆಯನ್ನು ಬಲವಂತವಾಗಿ ಹಿಡಿದುಕೊಂಡು ಅತ್ಯಾಚಾರ ಎಸಗಿದ ಆರೋಪಿಗೆ ಮಧುಗಿರಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶರಾದ ಲಾವಣ್ಯ ಲತಾ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ಆದೇಶಿಸಿದ್ದಾರೆ.

ಮಧುಗಿರಿ ತಾಲ್ಲೂಕು ಬೋರನಕುಂಟೆ ಗ್ರಾಮದಲ್ಲಿ 2017ರಲ್ಲಿ ರಂಗನಾಥ್ ಈ ಕೃತ್ಯ ಎಸಗಿದ್ದ. ಈ ಸಂಬಂಧ ಬಡವನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಅತ್ಯಾಚಾರ ಪ್ರಕರಣದಲ್ಲಿ 7 ವರ್ಷ ಜೈಲು ಹಾಗೂ ₹ 10 ಸಾವಿರ ದಂಡ ಹಾಗೂ ಕಲಂ 506 ರಡಿಯ ಅಪರಾಧಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಸರ್ಕಾರದ ಪರವಾಗಿ ವಕೀಲ ಎಸ್‌.ಕೆ.ನಾರಾಯಣ ಸ್ವಾಮಿ ವಾದಿಸಿದ್ದರು.

–––

ಕೊಲೆ: ಇಬ್ಬರಿಗೆ ಜೀವಾವಧಿ ಶಿಕ್ಷೆ

ತುಮಕೂರು:  ಕೂಲಿಯಲ್ಲಿ ಪಾಲು ಕೇಳಿದ ಕಾರಣಕ್ಕಾಗಿ ಮೇಸ್ತ್ರಿಯನ್ನು ಕೊಲೆ ಮಾಡಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಭರತ್ ಕುಮಾರ್‌ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಮಂಡ್ಯದ ಮಹಾದೇವ ನಾಯ್ಕ, ಶಂಕರಪ್ಪ ಶಿಕ್ಷೆಗೆ ಒಳಗಾದವರು. 2015ರಲ್ಲಿ ಇವರು ಮೇಸ್ತ್ರಿ ಬೋಜರಾಜ ಅವರೊಂದಿಗೆ ಹುಲಿಯೂರುದುರ್ಗದ ಚಂದ್ರಶೇಖರ್ ಅವರ ತೋಟದಲ್ಲಿ ಕೂಲಿ ಕೆಲಸಕ್ಕೆ ಸೇರಿದ್ದರು.

’ನಾನು ಮೇಸ್ತ್ರಿ. ನನಗೆ ಮದ್ಯ ಕೊಡಿಸಬೇಕು. ಖರ್ಚಿಗೆ ಕಾಸು ಕೊಡಬೇಕು. ನಾನು ಹೇಳಿದಂತೆ ಕೇಳಬೇಕು’ ಎಂದು ಭೋಜರಾಜ ಒತ್ತಾಯಿಸುತ್ತಿದ್ದರು. ಇದರಿಂದಾಗಿ ಸಿಟ್ಟಿಗೆದ್ದಿದ್ದ ಇಬ್ಬರು ಬೋಜರಾಜ್ ಮಲಗಿದ್ದಾಗ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದರು.

ಸರ್ಕಾರದ ಪರವಾಗಿ ವಕೀಲ ಎಸ್‌.ಕೆ.ನಾರಾಯಣ ಸ್ವಾಮಿ ವಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT