ಜೆಡಿಎಸ್ ಅಭ್ಯರ್ಥಿ ಡಿ.ಎ. ಗೋಪಾಲ್ ಮಾತನಾಡಿ, ‘ರಾಜ್ಯ ಸರ್ಕಾರದ ₹7500 ಕೋಟಿ ಅನುದಾನವನ್ನು ಮೂವರು ಶಾಸಕರೇ ಹಂಚಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರೇ ಹೇಳಿದ್ದಾರೆ. ಕ್ಷೇತ್ರಕ್ಕೆ ₹2,700 ಕೋಟಿ ಅನುದಾನ ಬಂದಿದೆ. ಆದರೆ, ಯಾವುದೇ ಕೆಲಸ ಆಗಿಲ್ಲ. ಶಾಸಕರು ಜನರ ಹಣ ಲೂಟಿ ಮಾಡಿದ್ದಾರೆ’ ಎಂದು ದೂರಿದರು.