ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಖುದ್ದು ಕೃಷ್ಣಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದರು. ಆದರೆ, ಅವರ ಮನವಿಗೂ ಸಚಿವರು ಪೂರಕವಾಗಿ ಸ್ಪಂದಿಸಲಿಲ್ಲ. ಕೊನೆಯ ಪಕ್ಷ ಮೈಸೂರಿನ ಕಾರ್ಯಕ್ರಮದಲ್ಲಾದರೂ ಭಾಗವಹಿಸುವಂತೆ ಸಿದ್ದರಾಮಯ್ಯ ತಮ್ಮ ಸಹೋದ್ಯೋಗಿಗೆ ಸೂಚಿಸಿದ್ದರೂ ಪ್ರಯೋಜನವಾಗಲಿಲ್ಲ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.