ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುತ್ತಿಗೆಗೆ ಚಾಕು ಇಟ್ಟು ಸುಲಿಗೆ

Last Updated 27 ಮಾರ್ಚ್ 2018, 19:39 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿ ಭಾನುವಾರ ಬೆಳಿಗ್ಗೆ ಇಬ್ಬರು ಸಾಫ್ಟ್‌ವೇರ್ ಉದ್ಯೋಗಿಗಳನ್ನು ಅಡ್ಡಗಟ್ಟಿದ ನಾಲ್ವರು ಮುಸುಕುಧಾರಿಗಳು, ಮಾರಕಾಸ್ತ್ರಗಳಿಂದ ಬೆದರಿಸಿ ಹಣ ಹಾಗೂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಈ ಸಂಬಂಧ ಬೇಗೂರು ರಸ್ತೆಯ ಎನ್‌. ಪ್ರಶಾಂತ್ ಹಾಗೂ ಪ್ರವೀಣ್ ಶರ್ಮಾ ಹೈಗ್ರೌಂಡ್ಸ್‌ ಠಾಣೆಗೆ ದೂರು ಕೊಟ್ಟಿದ್ದು, ಪೊಲೀಸರು ಕೃತ್ಯ ನಡೆದ ಸ್ಥಳದ ಸಿ.ಸಿ ಟಿ.ವಿ ಕ್ಯಾಮೆರಾಗಳ ಸುಳಿವು ಆಧರಿಸಿ ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.

‘ತಿರುಪತಿಯಿಂದ ಬಂದ ನಾವು ಬೆಳಿಗ್ಗೆ 5 ಗಂಟೆಗೆ ವಿಧಾನಸೌಧದ ಬಳಿ ಬಸ್ ಇಳಿದುಕೊಂಡು ಕಂಪನಿ ಕಡೆಗೆ ನಡೆದು ಹೋಗುತ್ತಿದ್ದಾಗ, ನಾಲ್ವರು ಯುವಕರು ಸುಲಿಗೆ ಮಾಡಿದರು’ ಎಂದು ಟೆಕಿಗಳು ದೂರಿನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT