ಕೋರಿಕೆ ಏನು?: ‘ಈ ಮೊದಲು ವಿವಾದಿತ ಜಾಗವನ್ನು ನಾಗರಿಕ ಬಳಕೆಗೆ ಮೀಸಲಿಡಲಾಗಿತ್ತು. ಇದನ್ನು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು (ಬಿಡಿಎ), ಕ್ಲಬ್ನ ಅಧ್ಯಕ್ಷರೂ ಆದ ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರ ಪ್ರಭಾವದ ಮೇರೆಗೆ ಕಳೆದ ವರ್ಷ ಡಿಸೆಂಬರ್ 28ರಂದು ಕ್ಲಬ್ಗೆ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಿದೆ. ಇದು ಕಾನೂನು ಬಾಹಿರ. ಆದ್ದರಿಂದ ಬಿಡಿಎ ಆದೇಶ ರದ್ದುಗೊಳಿಸಬೇಕು. ಆ ಜಾಗವನ್ನು ಸಾರ್ವಜನಿಕರ ಬಳಕೆಗೆ ಮೀಸಲಿಡಲು ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.