‘ಮಿದುಳು ಸೋಂಕಿನಿಂದ ಬಳಲುತ್ತಿದ್ದ ಚಿತ್ರದುರ್ಗ ನಗರದ ಟಿ.ಜಾಹ್ನವಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇದೇ 8ರಂದು ಮೃತಪಟ್ಟಿದ್ದಳು. ಇವಳ ಹೃದಯವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂ ನಿವಾಸಿ 9 ವರ್ಷದ ಬಾಲಕನಿಗೆ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಜೋಡಣೆ ಮಾಡಲಾಗಿದ್ದು ಈ ಜೋಡಣೆ ಸಂಪೂರ್ಣ ಯಶಸ್ವಿಯಾಗಿದೆ’ ಎಂದು ರಾಮಯ್ಯ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.