ನಗರದ ವಿಜಯಪುರದ ಗಣಪತಿ ಪೆಂಡಾಲ್ ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ‘ಪ್ರಗತಿ ಪಥ – ವಿಶ್ವಾಸದ ನಡಿಗೆ’ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.‘ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಕನಕದಾಸರ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ್ಸಿಗೆ ಇಲ್ಲ. ದಾರ್ಶನಿಕರು, ಮಹಾತ್ಮರು ಸಮಾಜ ಒಡೆಯುವ ಕೆಲಸ ಮಾಡಲಿಲ್ಲ. ಅವರು ಜನರಲ್ಲಿ ಸಾಮರಸ್ಯ ಮೂಡಿಸುವ ಕೆಲಸ ಮಾಡಿದರು. ಆದರೆ, ಕಾಂಗ್ರೆಸ್ ಜಾತಿಗಳನ್ನು ಎತ್ತಿ ಕಟ್ಟುತ್ತಿದೆ. ಜಾತಿಯ ವಿಷ ಬೀಜ ಬಿತ್ತುತ್ತಿದೆ’ ಎಂದು ದೂರಿದರು.ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಕನಕದಾಸರ ವಾರಸುದಾರಿಕೆ ಜಾತಿ ಆಧಾರದಲ್ಲಿ ದೊರೆಯುವುದಿಲ್ಲ. ಅವರು ಜಾತಿಯ ನಾಯಕರಲ್ಲ. ದಾರ್ಶನಿಕರ ಮಹಾತ್ಮರ ಸಿದ್ಧಾಂತ ಅಳವಡಿಸಿಕೊಂಡಾಗ ಮಾತ್ರ ಅವರ ವಾರಸುದಾರರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.