ಕೇರಳದ ಗಡಿಭಾಗ ಅಲೆಟ್ಟಿ ಬಳಿ ಘಟನೆ ನಡೆದಿದೆ. ಬೆಳಗ್ಗಿನ ಜಾವ 4.30ರ ಸುಮಾರಿಗೆ ಪಿಕಪ್ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ತಂಡವೊಂದಕ್ಕೆ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮುಖಾಮುಖಿಯಾಗಿದ್ದಾರೆ. ತಪಾಸಣೆಗಾಗಿ ವಾಹನ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ, ಪಿಕಪ್ನಲ್ಲಿದ್ದವರು ಮುಂದಕ್ಕೆ ಹೋಗಲು ಯತ್ನಿಸಿದ್ದಾರೆ.