ಬೆಂಗಳೂರು: ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ, ಸಾಹಿತಿ ಎಂ.ಆರ್.ಕಮಲಾ, ಕಲಾವಿದೆ ಸತ್ಯಭಾಮ, ಪ್ರಜಾಪಿತ ಬ್ರಹ್ಮಕುಮಾರಿ ಸಮಾಜದ ಬಿ.ಕೆ.ಪಾರ್ವತಿ, ಸಮಾಜ ಸೇವಕಿಯರಾದ ಸುಲೋಚನಾ ಎಸ್.ಗುಜ್ಜಾರ್, ಡಾ.ವನಜಾ ಶಿವಕುಮಾರ್ ಅವರಿಗೆ ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ‘ಸ್ಪಂದನ ಸ್ತ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.