ಹೊಸಹುಡ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾತವಾರ ಗ್ರಾಮದ ಕೃಷ್ಣಪ್ಪ, ಗಿಡ್ನಹಳ್ಳಿ ಗ್ರಾಮದ ಕೇಶವಮೂರ್ತಿ, ನಾರಾಯಣಸ್ವಾಮಿ, ಅನಿಲ್ ಮತ್ತು ಗೋಪಾಲರೆಡ್ಡಿ ತೋಟಗಳಿಗೆ ಶಾಸಕರು ಭೇಟಿ ನೀಡಿ ಪರಿಶೀಲಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ, ಮುಖಂಡರಾದ ದಾವೂದ್, ತಮ್ಮನಾಯಕನಹಳ್ಳಿ ಜಗದೀಶ್, ಮುನೇಗೌಡ, ಗಿಡ್ನಹಳ್ಳಿ ನಾರಾಯಣಸ್ವಾಮಿ ಇದ್ದರು.