ಕಾರವಾರ: ಚುನಾವಣಾ ನೀತಿ ಸಂಹಿತೆಯ ನೆಪವೊಡ್ಡಿ ಸಾಂಸ್ಕೃತಿಕ ಹಾಗೂ ರಾಜಕೀಯೇತರ ಮನರಂಜನಾ ಕಾರ್ಯಕ್ರಮಗಳಿಗೆ ತಡೆ ನೀಡಬಾರದು ಎಂದು ಅಂಕೋಲಾ ತಾಲ್ಲೂಕು ರಂಗಭೂಮಿ ಕಲಾವಿದರ ವೇದಿಕೆಯ ಸದಸ್ಯರು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.‘ಅಂಕೋಲಾ ಹಾಗೂ ಕಾರವಾರ ಭಾಗದಲ್ಲಿ ಏಪ್ರಿಲ್, ಮೇ ತಿಂಗಳಿನಲ್ಲಿ ಪ್ರತಿ ವರ್ಷ ಸಾಕಷ್ಟು ಜಾತ್ರೆಗಳು ನಡೆಯುತ್ತವೆ. ಈ ಸಂದರ್ಭದಲ್ಲಿ ಹವ್ಯಾಸಿ ಕಲಾವಿದರಿಂದ ಪ್ರತಿ ವರ್ಷದಂತೆ ನಾಟಕ, ಯಕ್ಷಗಾನ, ಜಾನಪದ ಹಾಗೂ ಸಾಂಸ್ಕೃತಿಕ ಕಲಾ ಪ್ರದರ್ಶನಗಳು ನಡೆಯುತ್ತವೆ. ಆದರೆ, ಇತ್ತೀಚೆಗೆ ಚುನಾವಣಾ ನೀತಿ ಸಂಹಿತೆಯ ನೆಪವೊಡ್ಡಿ ಇವುಗಳಿಗೆ ತಡೆ ನೀಡುವ ಪ್ರಸಂಗಗಳು ನಡೆಯುತ್ತಿವೆ’ ಎಂದು ಅಸಮಧಾನ ವ್ಯಕ್ತಪಡಿಸಿದರು.