ರಾಯಚೂರು: ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಕ್ರಿಷ್ಟಪ್ಪ ಸಲಹೆ ನೀಡಿದರು.ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಯಿಂದ ಸೋಮವಾರ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಪೊಲೀಸರು ಹಗಲಿರುಳು ಸಾರ್ವಜನಿಕರ ಸ್ವತ್ತು ರಕ್ಷಣೆ ಮಾಡಿ, ಸಮಾಜದಲ್ಲಿ ಶಾಂತಿ ಕಾಪಾಡು ತ್ತಾರೆ. ಆದರೆ, ಆರೋಗ್ಯವನ್ನು ಕಾಪಾಡಿ ಕೊಳ್ಳುವುದರಿಂದ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗುತ್ತದೆ ಎಂದರು.ಸಮಾಜದಲ್ಲಿ ಪೊಲೀಸ್ ಇಲಾಖೆಗೆ ಇರುವ ಗೌರವ ಹಾಗೂ ಘನತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪೊಲೀಸರು ಕಾರ್ಯನಿರ್ವಹಿಸುವ ಮೂಲಕ ಸಮಾಜದ ರಕ್ಷಣೆ ಮಾಡಬೇಕು. ನಿವೃತ್ತಿಯಾದವರಿಂದ ಅನುಭವ ಪಡೆ ದರೆ ದಕ್ಷತೆಯಿಂದ ಕೆಲಸ ಮಾಡಲು ಸಹ ಕಾರಿಯಾಗುತ್ತದೆ ಎಂದು ತಿಳಿಸಿದರು.