ಧಾರವಾಡ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ನಿರ್ದೇಶಕ ಡಾ.ದತ್ತಾತ್ರೇಯ ಬಂಟ್ ಅವರು ಬೇಷರತ್ ಕ್ಷಮೆ ಕೋರಿದ್ದರಿಂದ ಪ್ರಕರಣ ಕೈಬಿಟ್ಟ ಹೈಕೋರ್ಟ್, ದೂರು ಇತ್ಯರ್ಥಗೊಳಿಸಿತು. ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಸೇವಾ ಜ್ಯೇಷ್ಠತೆ ಪಟ್ಟಿ ಪ್ರಕಟಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದೀರಿ, ಅಲ್ಲದೇ ಪಟ್ಟಿ ಪ್ರಕಟಿಸಿರುವ ಕ್ರಮವನ್ನು ಸಮರ್ಥನೆ ಮಾಡಿಕೊಳ್ಳುವ ಮೂಲಕ ಅದನ್ನು ದೃಢೀಕರಿಸಿದ್ದೀರಿ. ನಿಮ್ಮ ವಿರುದ್ಧ ಯಾಕೆ ದೋಷಾರೋಪ ಪಟ್ಟಿ ಸಿದ್ಧಪಡಿಸಿ ಕ್ರಮ ಕೈಗೊಳ್ಳಬಾರದು ಎಂದು ಬಂಟ್ ಅವರನ್ನು ಖಾರವಾಗಿ ಪ್ರಶ್ನಿಸಿತು.