ಯಾದಗಿರಿ: ಕೊಲೆ, ಅತ್ಯಾಚಾರ, ವಂಚನೆ, ದೌರ್ಜನ್ಯ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳು ದಾಖಲಾಗಿದ್ದರೂ, ಪೊಲೀಸರು ಇದುವರೆಗೂ ಆರೋಪಿಗಳನ್ನು ಬಂಧಿಸಿ ಸಮರ್ಪಕ ತನಿಖೆ ನಡೆಸಿಲ್ಲ. ಪರಿಶಿಷ್ಟರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯುವಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಫಲರಾಗಿದ್ದಾರೆ’ ಎಂದು ಆರೋಪಿಸಿ ಶುಕ್ರವಾರ ದಲಿತ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.