ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಿದ್ದನಹಳ್ಳಿ ಗ್ರಾಮದಲ್ಲಿ ಜನಿಸಿದ ರಾಜಲಕ್ಷ್ಮಿಯವರು ಬಿ.ಎ. ಪದವಿ ಮತ್ತು ಹಿಂದಿ ವಿದ್ವಾನ್ ಪದವಿಧರರಾಗಿದ್ದರು. ಕನ್ನಡ ಸಾಹಿತ್ಯ ಪ್ರೇಮಿಯಾದ ಅವರು ನಾಲ್ಕು ದಶಕಗಳ ಹಿಂದೆ ಸಾಹಿತಿ ಬರಗೂರು ಅವರೊಂದಿಗೆ ಅಂತರಜಾತಿಯ ವಿವಾಹವಾಗಿದ್ದರು. ಬದುಕಿನುದ್ದಕ್ಕೂ ಬರಗೂರರ ಸಾಹಿತ್ಯ ಮತ್ತು ಸಾಮಾಜಿಕ ಚಳವಳಿಗಳ ಕ್ರಿಯಾಶೀಲತೆಗೆ ಬೆಂಬಲವಾಗಿ ನಿಂತಿದ್ದರು.