ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡಿಗೆ ಬಂದಿದ್ದ ಕಾಡುಕೋಣ ಸಾವು

Last Updated 9 ಏಪ್ರಿಲ್ 2018, 7:38 IST
ಅಕ್ಷರ ಗಾತ್ರ

ದಾವಣಗೆರೆ: ಆಹಾರ, ನೀರು ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡು ಕೋಣವೊಂದು ಚನ್ನಗಿರಿ ತಾಲ್ಲೂಕಿನ ಕೆಂಪಯ್ಯನ ಕೊಪ್ಪಲು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಸಾವನ್ನಪ್ಪಿದೆ.

ಶನಿವಾರ ಮನ್ನಾಜಂಗಲ್‌ ಅರಣ್ಯ ಪ್ರದೇಶ ಸಮೀಪ ಕಾಡುಕೋಣ ಕಾಣಿಸಿಕೊಂಡ ಬಗ್ಗೆ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸಮೀಪದ ಅಡಿಕೆ ತೋಟ ಹೊಕ್ಕಿದ್ದ ಕಾಡುಕೋಣವನ್ನು ಸೆರೆಹಿಡಿಯಲು ಸಿಬ್ಬಂದಿ ಮುಂದಾಗಿದ್ದರು. ಸೆರೆ ಹಿಡಿಯುವಷ್ಟರಲ್ಲಿ ಅದು ಮೃತಪಟ್ಟಿದೆ ಎಂದು ಚನ್ನಗಿರಿ ವಲಯದ ಅರಣ್ಯಾಧಿಕಾರಿ ಮಾಹಿತಿ ನೀಡಿದರು.

ಕಾಯಿಲೆಯಿಂದ ಮೃತಪಟ್ಟಿರಬಹುದು. ಪ್ರಾಣಿಗಳು ದಾಳಿ ನಡೆಸಿರುವ ಗುರುತುಗಳು ಪತ್ತೆಯಾಗಿಲ್ಲ. ಗ್ರಾಮಸ್ಥರ ಮೇಲೂ ಕೋಣ ದಾಳಿ ನಡೆಸಿಲ್ಲ. ಕಾಡಿನಲ್ಲಿ ಮೇವು ಹಾಗೂ ನೀರಿನ ಕೊರತೆ ಉಂಟಾಗಿ ಸಾವನ್ನಪ್ಪಿರಬಹುದು ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT