ಬೆಂಗಳೂರು: ಎದೆ ನೋವು ಕಾಣಿಸಿಕೊಂಡಿದ್ದರಿಂದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಂಗಳವಾರ ಸಂಜೆ ಇಲ್ಲಿನ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿಕ್ಕಲಸಂದ್ರದ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಜೀ–ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮದ ಚಿತ್ರೀಕರಣದ ವೇಳೆ ಅವರಿಗೆ ಸಣ್ಣದಾಗಿ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
‘ಶಕುಂತ್ಲೆ’ ಸಿನಿಮಾದ ಸಿದ್ಧತೆಗಾಗಿ ಸಾಕಷ್ಟು ಒಡಾಟ ನಡೆಸಿದ್ದರಿಂದ ಕಾಲು ನೋವೂ ಕಾಣಿಸಿಕೊಂಡಿತ್ತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗುರುವಾರ ಅಥವಾ ಶುಕ್ರವಾರ ಮನೆಗೆ ಮರಳಲಿದ್ದಾರೆ’ ಎಂದು ಮೂಲಗಳು ಹೇಳಿವೆ.