ಚಿಕ್ಕಮಗಳೂರು ಜಿಲ್ಲೆಯ ನಿವಾಸಿ ಮಹೇಂದ್ರಕುಮಾರ್ ಗೌಡ ಅವರು ತಾಲ್ಲೂಕಿನ, ದೇವಲಾಪುರ ಹೋಬಳಿ ಬಿಂಡೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ ಪರ ಪ್ರಚಾರ ಮಾಡುತ್ತಾ, ತಾಲ್ಲೂಕಿನ ಜನರ ಬಗ್ಗೆ ಮತ್ತು ಜೆಡಿಎಸ್ ಅಭ್ಯರ್ಥಿ ಸುರೇಶ್ ಗೌಡ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾಡಿರುವ ಭಾಷಣದ ತುಣುಕುಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದ ಕ್ಷೇತ್ರದಲ್ಲಿ ಗಲಭೆ ಮತ್ತು ಘರ್ಷಣೆಗೆ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.