ಶ್ರೀರಾಮುಲು ಮತ್ತು ತಿಪ್ಪೇಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಸಿ, ಇಬ್ಬರ ಮಧ್ಯೆ ಸಂಧಾನ ನಡೆಸುವ ಪ್ರಯತ್ನವನ್ನು ಯಡಿಯೂರಪ್ಪ ಶನಿವಾರ ಮಾಡಿದರು. ಆಕ್ರೋಶದಿಂದ ಕುದಿಯುತ್ತಿರುವ ತಿಪ್ಪೇಸ್ವಾಮಿ ಬೆಂಗಳೂರಿಗೆ ಬರಲಿಲ್ಲ. ದೂರವಾಣಿಯಲ್ಲಿ ಯಡಿಯೂರಪ್ಪ ಜತೆ ಮಾತನಾಡಿದ ಶ್ರೀರಾಮುಲು, ‘ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ’ ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.