‘40 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ನಾನು ಎರಡನೇ ಬಾರಿಗೆ ಭಾಲ್ಕಿ ಕ್ಷೇತ್ರದಿಂದ ಆಯ್ಕೆಯಾದಾಗ ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. 17 ಜನ ಶಾಸಕರು ಸಹಿ ಮಾಡಿ ನನಗೆ ಸಚಿವ ಸ್ಥಾನ ಕೊಡುವಂತೆ ಲಿಖಿತ ಮನವಿ ಮಾಡಿದ್ದರು. ಆದರೆ, ಯಡಿಯೂರಪ್ಪ ಅವರು ಮನವಿಯನ್ನು ಪುರಸ್ಕರಿಸಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.