ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿದ್ದ ಮೊಹರೆ ಹಣಮಂತರಾಯ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೊಡ್ಡ ಪತ್ರಿಕೆಯ ಸಂಪಾದಕರಾಗಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದರೂ ಅವರು, ಒಂದು ಮನೆ ಕೂಡ ಕಟ್ಟಿಕೊಳ್ಳಲಿಲ್ಲ. ಇದು ಅವರ ಪ್ರಾಮಾಣಿಕತೆ ಮತ್ತು ಸರಳತೆಗೆ ಸಾಕ್ಷಿ. ಅವರ ಆದರ್ಶಗಳು ಇಂದು ಎಲ್ಲರಿಗೂ ಮಾದರಿ’ ಎಂದರು.