ವಿವಿಧ ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ಗೆ ಪೈಪೋಟಿ ಹೆಚ್ಚಿದೆಯಲ್ಲ ಎಂದು ಪತ್ರಕರ್ತರು ಕೇಳಿದಾಗ, ‘ಈ ವಿಚಾರದಲ್ಲಿ ನನಗೆ ಖುಷಿಯಾಗುತ್ತಿದೆ. ಒಂದು ಕಾಲದಲ್ಲಿ ಅಭ್ಯರ್ಥಿಗಳನ್ನು ಹುಡುಕಿಕೊಂಡು ಹೋಗಬೇಕಿತ್ತು. ಆದರೆ, ಈಗ ಹಲವರು ತಮ್ಮ ಆಸಕ್ತಿ ತೋರ್ಪಡಿಸುತ್ತಿದ್ದಾರೆ. ಪಕ್ಷದಲ್ಲಿ ಇರುವ ಎಲ್ಲರೂ ಪ್ರಬುದ್ಧ ರಾಜಕಾರಣಿಗಳು. ಎಲ್ಲರೂ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ’ ಎಂದು ಸಮಜಾಯಿಷಿ ನೀಡಿದರು.