ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಂದೋಲನದ ಜಿಲ್ಲಾ ಸಂಚಾಲಕಿ ಪುಷ್ಪಲತಾ, ರಾಜ್ಯದಲ್ಲಿ ವಿವಿಧ ಪಕ್ಷಗಳು ಆರೋಪ– ಪ್ರತ್ಯಾರೋಪಗಳಲ್ಲಿ ಮುಳುಗಿವೆ. ನಿರುದ್ಯೋಗ ಪರಿಹಾರಕ್ಕಾಗಿ ರಾಜ್ಯದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಪ್ರತಿ ಜಿಲ್ಲೆಯಲ್ಲಿ ಯುವಕರನ್ನು ಆಂದೋಲನದ ಪದಾಧಿಕಾರಿಗಳನ್ನು ನೇಮಿಸಿ, ಉದ್ಯೋಗದ ಬೇಡಿಕೆಗಳನ್ನು ಪಕ್ಷಗಳ ಮುಂದಿಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ಅವರು ಹೇಳಿದರು.