ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಶೇಖರ ಸಜ್ಜನ, ‘ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತ ಆಯೋಗದ ತಜ್ಞರ ಸಮಿತಿಯ ಅನ್ವಯ ಲಿಂಗಾಯತ/ವೀರಶೈವ ಲಿಂಗಾಯತಕ್ಕೆ ಅಲ್ಪಸಂಖ್ಯಾತ ಧರ್ಮದ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. 94 ಒಳಪಂಗಡಗಳಲ್ಲಿ ಗಾಣಿಗ ಸಮುದಾಯವನ್ನು ಸೇರಿಸಲಾಗಿದೆ. ನಮ್ಮ ಗಮನಕ್ಕೆ ತರದೆ ಏಕಾಏಕಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ದೂರಿದರು.