‘ಬಡ್ತಿ ವಿಚಾರದಲ್ಲಿ ಅನೇಕ ಉಪನ್ಯಾಸಕರಿಗೆ ಅನ್ಯಾಯ ಆಗಿತ್ತು. ಪ್ರಾಂಶುಪಾಲರ ವೃಂದದವರಿಗೆ ₹ 30,400– ₹ 51,100 ವೇತನಾ ಶ್ರೇಣಿ ಇದೆ. ಈ ಶ್ರೇಣಿಗೆ ಬಡ್ತಿ ಮೀಸಲಾತಿ ಅನ್ವಯ ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಸ್ಪಷ್ಟಪಡಿಸಿತ್ತು. ಈ ತೀರ್ಪಿನ ಬಳಿಕವಾದರೂ ನಮಗೆ ನ್ಯಾಯ ಸಿಗಬಹುದು ಎಂದು ಆಶಿಸಿದ್ದೆವು. ಆದರೆ, ಇಲಾಖೆಯ ಈ ಕ್ರಮದಿಂದ ನ್ಯಾಯ ಮರೀಚಿಕೆ ಆಗಲಿದೆ. ಅನೇಕ ಉಪನ್ಯಾಸಕರು ನಿವೃತ್ತಿಯ ಅಂಚಿನಲ್ಲಿದ್ದಾರೆ. ಅವರು ಪ್ರಾಂಶುಪಾಲರಾಗಿ ಬಡ್ತಿ ಹೊಂದುವ ಅವಕಾಶದಿಂದ ವಂಚಿತರಾಗಲಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.