ಈ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವು ಕುರುಬ ಸಮುದಾಯದ ಟಿ.ಎಚ್.ಶಿವಶಂಕರಪ್ಪ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿ ಪಕ್ಷೇತರವಾಗಿ ಕಣಕ್ಕಿಳಿಯುತ್ತಿರುವ ಶಾಸಕ ಜಿ.ಎಚ್.ಶ್ರೀನಿವಾಸ್ ಅವರೂ ಕುರುಬ ಸಮುದಾಯದವರು. ಕ್ಷೇತ್ರದಲ್ಲಿನ ಪ್ರಬಲ ಸಮುದಾಯಗಳ ಪೈಕಿ ಕುರುಬ ಸಮುದಾಯವೂ ಒಂದು. ಆದರೆ, ಇಬ್ಬರು ಕಣಕ್ಕಿಳಿಯುತ್ತಿರುವುದು ಸಮುದಾಯದವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.