‘ಬಿ.ಪಿ.ವೆಂಕಟಮುನಿಯಪ್ಪ ಅವರಿಗೆ ಟಿಕೆಟ್ ನೀಡಿರುವುದು ನನಗೆ ಬೇಸರವಿಲ್ಲ. ಆದರೆ ಬೆಜೆಪಿ ನನ್ನನ್ನು ನಡೆಸಿಕೊಂಡ ರೀತಿಯಿಂದ ಬೇಸರವಾಗಿದೆ. ರಾಜ್ಯ ಮತ್ತು ರಾಷ್ಟ್ರ ನಾಯಕರು ಸಮೀಕ್ಷೆ ನಡೆಸಿ, ಜನರ ಮನ್ನಣೆಯಂತೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಸಮೀಕ್ಷೆಗಳಲ್ಲಿ ಜನರು ನನಗೆ ಮನ್ನಣೆ ನೀಡಿದ್ದರು. ಆದರೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವುದನ್ನು ಅವಲೋಕಿಸಿದರೆ ವರಿಷ್ಠರು ಯಾವ ಸಮೀಕ್ಷೆಯೂ ನಡೆಸಿಲ್ಲ. ಅವರು ಹೇಳಿದಂತೆ ನಡೆದುಕೊಂಡಿಲ್ಲ. ಈ ನಿರ್ಧಾರ ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.