ಕೇಂದ್ರ ಚುನಾವಣಾ ಆಯೋಗ ನಿಯೋಜಿಸಿರುವ ವೆಚ್ಚ ವೀಕ್ಷಕರಾದ ಎಸ್. ಅನಿಲ್ ಕುಮಾರ್, ವಿನೋದ್ ಶರ್ಮಾ, ಶ್ಯಾಂ ಮನೋಹರ್ ಸಿಂಗ್, ಅಮಿತ್ ಕುಮಾರ್ ಸಿಂಘಾಲ್ ಈವರೆಗಿನ ಚುನಾವಣಾ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಂ.ಆರ್. ರವಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.