ದೇವಾಲಯದ ಒಳಾಂಗಣದಲ್ಲಿ ಶ್ರೀ ದೇವರ ಉತ್ಸವ ಬಲಿ ನಡೆದ ಬಳಿಕ ಗೋಪುರದ ಕಟ್ಟೆಯಲ್ಲಿ ಕಟ್ಟೆ ಪೂಜೆ ನಡೆಯಿತು. ಬಳಿಕ ದೇವಾ ಲಯದ ಎದುರಿನ ದೇವರ ಮಾರುಗದ್ದೆಯಲ್ಲಿ ಭವ್ಯವಾಗಿ ಅಲಂಕರಿಸಿ ನಿಲ್ಲಿಸಲಾಗಿದ್ದ ಬ್ರಹ್ಮರಥದ ಬಳಿಗೆ ಸಕಲ ಸೇವೆಗಳೊಂದಿಗೆ ದೇವರ ಆಗಮನವಾದ ಬಳಿಕ ರಾತ್ರಿ ದೇವರ ರಥಾರೂಢನ ನಡೆಯಿತು. ಹತ್ತೂರ ಒಡೆಯ ಮಹಾಲಿಂಗೇಶ್ವರ ನಿಗೆ `ಹರಹರ ಮಹಾದೇವಾ' ಜಯ ಘೋಷ ಮೊಳಗಿದ್ದು, ಭಕ್ತಸಾಗರದಲ್ಲಿ ಭಕ್ತಿಯ ಪರಾಕಾಷ್ಠೆ ಮುಗಿಲು ಮುಟ್ಟಿತ್ತು. ರಥಾರೂಢರಾದ ದೇವರಿಗೆ ಮಹಾಮಂಗಳಾರತಿ ಬೆಳಗಿದ ಕೂಡಲೇ ಬೆಡಿ ಪ್ರದರ್ಶನ ಆರಂಭಗೊಂಡಿತು.