ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಲಿನ ಮೇಲೆ ದಾಳಿ

Last Updated 20 ಏಪ್ರಿಲ್ 2018, 6:24 IST
ಅಕ್ಷರ ಗಾತ್ರ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರ ತಂಡ ಗುರುವಾರ ರಾತ್ರಿ ದಿಢೀರ್‌ ದಾಳಿ ನಡೆಸಿದೆ.

ಚುನಾವಣೆ ನೀತಿ ಸಂಹಿತೆ ಪಾಲನೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ರಾತ್ರಿ 7.30ರ ಸುಮಾರಿಗೆ ಜೈಲು ಪ್ರವೇಶಿಸಿದ ಪೊಲೀಸರ ತಂಡ 10.30ರ ವರೆಗೆ ತಪಾಸಣೆ ನಡೆಸಿತು ಎಂದು ಗೊತ್ತಾಗಿದೆ.

ಕೈದಿಗಳು ಬಳಸುತ್ತಿದ್ದ ಸೀಮ್‌ ಕಾರ್ಡ್‌, ಗಾಂಜಾ ಸೇವಿಸಲು ಬಳಸುತ್ತಿದ್ದ ಪೈಪ್‌, ಪೆನ್‌ ಡ್ರೈವ್‌, ಸೇರಿದಂತೆ ಇನ್ನಿತರ ನಿಷೇಧಿತ ವಸ್ತುಗಳನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂವರು ಡಿಸಿಪಿಗಳು ಸೇರಿ 200 ಅಧಿಕಾರಿಗಳು ಮತ್ತು ಕಾನ್‌ಸ್ಟೆಬಲ್‌ಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT