ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Last Updated 20 ಏಪ್ರಿಲ್ 2018, 6:36 IST
ಅಕ್ಷರ ಗಾತ್ರ

ದಾವಣಗೆರೆ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಗುರುವಾರ ಜಿಲ್ಲೆಯಲ್ಲಿ ಒಟ್ಟು 5 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸುಭಾನ್‌ ಖಾನ್‌, ಹರಿಹರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ
ಯಾಗಿ ಕೆ. ಸೈಯದ್‌ ಜಬೀವುಲ್ಲಾ, ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಡಿ.ಜಿ.ಶಾಂತನಗೌಡ, ಬಿಜೆಪಿಯಿಂದ ಎಂ.ಪಿ. ರೇಣುಕಾಚಾರ್ಯ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಗುರುಪಾದಯ್ಯ ಕಬ್ಬಿಣ ಕಂತಿಮಠ ನಾಮಪತ್ರ ಸಲ್ಲಿಸಿದರು.

ಗುರುವಾರ ಮಧ್ಯಾಹ್ನ 1ರಿಂದ ‘ರಾಜಯೋಗ’ ಇದೆ ಎಂದು ಜ್ಯೋತಿಷಿಗಳು ತಿಳಿಸಿದ್ದ ಹಿನ್ನೆಲೆಯಲ್ಲಿ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಸ್‌.ಎ. ರವೀಂದ್ರನಾಥ್ ಅವರು ಏ.20ರಂದು ಬೆಳಿಗ್ಗೆ 11ಕ್ಕೆ ನಾಮಪತ್ರ ಸಲ್ಲಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT