ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ, ಬಾಲಕ ಸಾವು

Last Updated 20 ಏಪ್ರಿಲ್ 2018, 10:01 IST
ಅಕ್ಷರ ಗಾತ್ರ

ಬಂದಾ: ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ತಮ್ಮ ಮಗ ಮೃತಪಟ್ಟಿದ್ದಾನೆ ಎಂದು ಇಲ್ಲಿನ ಕುಟುಂಬವೊಂದು ಆರೋಪಿಸಿದೆ.

ವೈದ್ಯರಿಗೆ ನೀಡಲು ತಮ್ಮ ಬಳಿ ಹಣವಿಲ್ಲದ ಕಾರಣ ಮಗನಿಗೆ ಚಿಕತ್ಸೆ ನಿರಾಕರಿಸಲಾಯಿತು ಎಂದು ಮೃತ ಬಾಲಕನ ತಂದೆ ಹೇಳಿಕೆ ನೀಡಿದ್ದಾರೆ.

‘ನನ್ನ ಬಳಿ ಹಣವಿಲ್ಲದ ಕಾರಣ ವೈದ್ಯರು ನನ್ನ ಮಗನಿಗೆ ಚಿಕಿತ್ಸೆ ನೀಡಲಿಲ್ಲ. ಅವರು ಹಣಕ್ಕಾಗಿ ನನ್ನನ್ನು ಪದೇಪದೆ ಒತ್ತಾಯಿಸಿದರು’ ಎಂದಿದ್ದಾರೆ.

ಬಾಲಕನ ಶವವನ್ನು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕೊಂಡೊಯ್ದಿರುವ ಕುಟುಂಬ ನ್ಯಾಯಕ್ಕಾಗಿ ಆಗ್ರಹಿಸಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಪ್ರಕರಣದ ತನಿಖೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT