ಇದಕ್ಕೂ ಮುನ್ನ ಭಾರತವು ಬ್ರಿಟನ್ ಬಳಿ, ಕೃತ್ಯದ ಬಗ್ಗೆ ತನ್ನ ತೀವ್ರ ಅಸಮಾಧಾನವನ್ನು ದಾಖಲಿಸಿತ್ತು. ‘ಭಾರತದ ಧ್ವಜವನ್ನು ಹರಿದು, ಬೆಂಕಿ ಹಚ್ಚಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಹೀಗೆ ಮಾಡಿರೆಂದು ಪ್ರತಿಭಟನಾಕಾರರನ್ನು ಪ್ರಚೋದಿಸಿದವರ ವಿರುದ್ಧವೂ ಕಾನೂನು ಕ್ರಮ ತೆಗೆದುಕೊಳ್ಳಿ’ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬ್ರಿಟನ್ ಸರ್ಕಾರವನ್ನು ಆಗ್ರಹಿಸಿತ್ತು.