‘ದೇವೇಗೌಡರು ರಾಜಕಾರಣದಲ್ಲಿ ಭೀಷ್ಮ ಇದ್ದಂತೆ. ಅವರು ಪ್ರಧಾನಿಯಾದಾಗ ನಾವೆಲ್ಲ ಬಹಿರಂಗವಾಗಿ ನೈತಿಕ ಬೆಂಬಲ ನೀಡಿದ್ದೆವು. ಇದು ಅವರಿಗೆ ಗೊತ್ತು. ಅಲ್ಲದೆ, ಕಾವೇರಿ ನೀರಿನ ಹೋರಾಟದಲ್ಲಿ ಅವರ ಪಕ್ಷಾತೀತ ನಡೆಯನ್ನು ಮೆಚ್ಚಿ ಮಾಧ್ಯಮದಲ್ಲಿ ಲೇಖನ ಬರೆದಿದ್ದೆ. ಮೇಲುಕೋಟೆಯಲ್ಲಿ ಸ್ವರಾಜ್ ಇಂಡಿಯಾ ಪಕ್ಷ ಮತ್ತು ಜೆಡಿಎಸ್ ನಡುವೆ ನೇರ ಸ್ಪರ್ಧೆ ಇದೆ. ದೇವೇಗೌಡರು ನಮ್ಮ ಎದುರು ಪಕ್ಷದವರಾಗಿರಬಹುದು. ರಾಜಕೀಯ ಭಿನ್ನಾಭಿಪ್ರಾಯ ಇರುವುದು ಸರ್ವೇಸಾಮಾನ್ಯ. ಆದರೆ, ಇಂತಹ ಸಂದರ್ಭದಲ್ಲಿ ದೇವೇಗೌಡರ ಆಶೀರ್ವಾದ ದರ್ಶನ್ ಪುಟ್ಟಣ್ಣಯ್ಯ ಮೇಲಿರಲಿ’ ಎಂದು ಕೋರಿದರು.