‘ಟಿಕೆಟ್ ಘೋಷಣೆಯಾದ ಬೆನ್ನಲ್ಲೇ, ಬಿಜೆಪಿ ತಮಗೆ ಅನ್ಯಾಯ ಮಾಡಿದೆ ಎಂದು ಬಿದರೂರ ಅವರು ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದರು. ಬೆಂಬಲಿಗರು ಹಾಗೂ ಅಭಿಮಾನಿಗಳ ಸಭೆ ಕರೆದು ಚರ್ಚಿಸಿ, ಇನ್ನೆರಡು ದಿನಗಳಲ್ಲಿ ಪರ್ಯಾಯ ರಾಜಕೀಯ ಶಕ್ತಿ ಪ್ರದರ್ಶನದ ಕುರಿತು ಸ್ಪಷ್ಟ ನಿಲುವು ಪ್ರಕಟಿಸುವುದಾಗಿ ಹೇಳಿದ್ದರು. ಆದರೆ, 2 ದಿನಗಳು ಕಳೆದರೂ ಅವರು ಈ ಕುರಿತು ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ.