ಶಿರಾ: ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಶುಕ್ರವಾರ ಒಟ್ಟು 6 ನಾಮಪತ್ರಗಳು ಸಲ್ಲಿಕೆಯಾದವು. ಈಗಾಗಲೇ 4 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟು 10 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ. ಕಮ್ಯೂನಿಸ್ಟ್ ಪಕ್ಷದಿಂದ ಗಿರೀಶ್, ಜೆಡಿಎಸ್ ಅಭ್ಯರ್ಥಿಯಾಗಿ ಬಿ.ಸತ್ಯನಾರಾಯಣ, ಪಕ್ಷೇತರರಾಗಿ ಎಂ.ಚಿದಾನಂದ್, ಎಸ್.ನವೀನ್, ಲಕ್ಷ್ಮಿಕಾಂತ್ ನಾಮಪತ್ರ ಸಲ್ಲಿಸಿದರು. ಸಚಿವ ಟಿ.ಬಿ.ಜಯಚಂದ್ರ ಅವರ ಪರವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಞ ಅಲ್ಲಾಭಕಾಷ್ ಪ್ಯಾರು ಹಾಗೂ ಎನ್.ಸಿ.ದೊಡ್ಡಯ್ಯ ನಾಮಪತ್ರ ಸಲ್ಲಿಸಿದರು.