ಮುರಳೀಧರರಾವ್ ಅವರು ತಮ್ಮ ಟ್ವೀಟ್ನಲ್ಲಿ, ‘ಸಿದ್ದರಾಮಯ್ಯನವರೇ ಹೆದರಿಬಿಟ್ಟಿರಾ?, ಬಹಳ ಕಷ್ಟಪಟ್ಟು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವನ್ನು ಆಯ್ದುಕೊಂಡಿದ್ದೀರಿ. ಈಗ ಅಲ್ಲಿಯೂ ಸೋಲುವ ಸೂಚನೆಗಳು ಕಂಡಾಗ ಬೇರೆ ಕ್ಷೇತ್ರ ಹುಡುಕುತ್ತಿದ್ದೀರಿ. ನಾನು ನಿಮ್ಮ ಸಂದೇಹವನ್ನು ನಿವಾರಿಸುತ್ತೇನೆ. ನಿಮ್ಮ ಎರಡು ಕ್ಷೇತ್ರಗಳು ಮಾತ್ರವಲ್ಲ,ಇಡೀ ಕರ್ನಾಟಕವೇ ಕಾಂಗ್ರೆಸ್ಮುಕ್ತ ಮಾಡಲು ಹೊರಟಿದ್ದೇವೆ’ ಹೇಳಿದ್ದಾರೆ.