ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಶಿವಣ್ಣ ಕಳೆದ ವಾರ ಜೆಡಿಎಸ್ ತ್ಯಜಿಸಿ ಬಿಜೆಪಿ ಸೇರಿದ್ದರು. ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂದೇ ಬಿಂಬಿತವಾಗಿತ್ತು. ಟಿಕೆಟ್ ನೀಡುವಂತೆ ಕೃಷ್ಣ ಅವರು ಮುಖಂಡರಿಗೆ ಸಲಹೆ ಮಾಡಿದ್ದರು. ಆದರೆ ಶಿವಣ್ಣ ಅವರಿಗೆ ಟಿಕೆಟ್ ಕೈತಪ್ಪಿದ್ದು, ರಾಜಕಾರಣದಿಂದ ಹಿಂದೆ ಸರಿದಿರುವ ಮುಡಾ ಮಾಜಿ ಅಧ್ಯಕ್ಷ ಬಿ.ಬಸವೇಗೌಡ ಅವರಿಗೆ ಟಿಕೆಟ್ ನೀಡಲಾಗಿದೆ. ಅವರು ಟಿಕೆಟ್ಗಾಗಿ ಅರ್ಜಿಯನ್ನೂ ಹಾಕಿರಲಿಲ್ಲ.