ಕೃಷ್ಣಗಿರಿಯ ಶ್ರೀನಿವಾಸ್, ಎರಡು ವರ್ಷಗಳ ಹಿಂದೆ ನಗರಕ್ಕೆ ಬಂದು ಬಾಗಲೂರಿನಲ್ಲಿ ನೆಲೆಸಿದ್ದಾನೆ. ಮನೆ ಸಮೀಪವೇ ಸಣ್ಣ ಅಂಗಡಿ ಇಟ್ಟುಕೊಂಡಿರುವ ಈತ, ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗಾಂಜಾ ಮಾರುತ್ತಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ, ಆರೋಪಿ ಮಾಲು ಸಮೇತ ಸಿಕ್ಕಿಬಿದ್ದ ಎಂದು ಪೊಲೀಸರು ಹೇಳಿದರು.