‘ಆರು ತಿಂಗಳ ಹಿಂದೆ ದೇವಸ್ಥಾನದ ಪಕ್ಕದ ಕಟ್ಟಡ ಖರೀದಿಸಿರುವ ಪ್ರಾಂಶುಪಾಲರಾದ ರೂಪಾ, ಇದೀಗ ದೇವಸ್ಥಾನವನ್ನು ಜೆಸಿಬಿ ಮೂಲಕ ನೆಲಸಮ ಮಾಡಿಸಿದ್ದಾರೆ. ಅಲ್ಲದೆ, ಆ ಜಾಗವೂ ತಮಗೇ ಸೇರಬೇಕು ಎಂದು ವಾದಿಸುತ್ತಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ಸ್ಥಳೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಹೀಗಾಗಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಟ್ರಸ್ಟಿ ಪ್ರಕಾಶ್ ದೂರು ಕೊಟ್ಟಿದ್ದಾರೆ.