‘ವರ್ಗಾವಣೆಗೊಂಡಿರುವ ವಿಜ್ಞಾನ ವಿಷಯದ ಪ್ರಾಧ್ಯಾಪಕರ ಬದಲಿಗೆ ಬೇರೊಬ್ಬರು ಬಂದಿಲ್ಲ. ಆ ತರಗತಿಗಳೇ ನಡೆಯುತ್ತಿಲ್ಲ. ಜೀವಶಾಸ್ತ್ರ, ಭೌತಶಾಸ್ತ್ರ, ಗಣಿತ ಮತ್ತು ರಸಾಯನ ಶಾಸ್ತ್ರವನ್ನು ಒಬ್ಬರೇ ಅತಿಥಿ ಉಪನ್ಯಾಸಕರು ಬೋಧಿಸುತ್ತಾರೆ. ಸೆಪ್ಟೆಂಬರ್ನಲ್ಲಿ ಅರ್ಧ ವಾರ್ಷಿಕ ಪರೀಕ್ಷೆಗಳು ನಡೆಯುತ್ತವೆ. ಪಾಠ ಕೇಳದೆ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಕಷ್ಟವಾಗುತ್ತದೆ. ಕೂಡಲೇ ಖಾಲಿ ಇರುವ ಉಪನ್ಯಾಸಕರ ಹುದ್ದೆ ಭರ್ತಿ ಮಾಡಿದರೆ ವಿದ್ಯಾರ್ಥಿಗಳ ಓದಿಗೆ ಅನುಕೂಲವಾಗುತ್ತದೆ. ಇಲ್ಲವಾದಲ್ಲಿ ಅವರ ಭವಿಷ್ಯ ಹಾಳಾಗಬಹುದು’ ಎಂದು ವಿವರಿಸಿದ್ದಾರೆ.