‘ನಾಲ್ಕು ದಿನಗಳಲ್ಲಿ 15 ಕಾರ್ಮಿಕರು ಅನಾರೋಗ್ಯಕ್ಕೆ ಒಳಗಾಗಿದ್ದರು. ಎಲ್ಲರಿಗೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬಾವಿಗೆ ಕ್ಲೋರಿನ್ ಸಿಂಪಡಣೆ ಮಾಡಲಾಗಿದೆ. ಅಲ್ಲದೇ ನೀರನ್ನು ಕುದಿಸಿಯೇ ಕುಡಿಯುವಂತೆ, ಆಹಾರ ಸೇವಿಸುವ ಮೊದಲು ಕೈಗಳನ್ನು ತೊಳೆದುಕೊಳ್ಳುವಂತೆ ಕಾರ್ಮಿಕರಿಗೆ ಸೂಚಿಸಲಾಗಿದೆ. ಮೀನುಗಾರರ ಮುಖಂಡರನ್ನೂ ಭೇಟಿ ಮಾಡಿ ಅವರಿಗೆ ಮಾಹಿತಿ ನೀಡಲಾಗಿದೆ. ಕಾರ್ಮಿಕರ ರಕ್ತದ ಮಾದರಿ, ಬಾವಿಯ ನೀರಿನ ಮಾದರಿ ಸಂಗ್ರಹಿಸಲಾಗಿದ್ದು, ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ’ ಎಂದು ಅವರು ತಿಳಿಸಿದರು.