ನವದೆಹಲಿ: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರಾದ ಓಂಪ್ರಕಾಶ್ ರಾವತ್ ಗುರುವಾರ ತಿಳಿಸಿದ್ದಾರೆ.
ಬಿಜೆಪಿಯ ಒಂದು ದೇಶ, ಒಂದು ಚುನಾವಣೆ ಅಭಿಯಾನಕ್ಕೆಅವರು ಪ್ರತಿಕ್ರಿಯಿಸಿ ಮಾತನಾಡಿದರು.
ಲೋಕಸಭೆ ಮತ್ತು ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಬಗ್ಗೆ ಬಿಜೆಪಿ ಒಲವು ವ್ಯಕ್ತಪಡಿಸಿತ್ತು. ಇದನ್ನುಪ್ರತಿಪಕ್ಷಗಳು ವಿರೋಧಿಸಿದ್ದವು
ಏಕಕಾಲದಲ್ಲಿ ಚುನಾವಣೆ ನಡೆಸಲು ಕಾನೂನು ನಿಯಮಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ರಾವತ್ ಈ ಹಿಂದೆ ಹೇಳಿದ್ದರು. ಗುರುವಾರಔರಂಗಬಾದ್ನಲ್ಲಿ ಪಿಟಿಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಸಿದ ಅವರು ಏಕಕಾಲದಲ್ಲಿ ಚುನಾವಣೆ ನಡೆಸಲು ಅಸಾಧ್ಯ ಎಂದು ಹೇಳಿದ್ದಾರೆ.