ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಚಿತ್ರಕಲಾ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಮತದಾರರ ಜಾಗೃತಿಗಾಗಿ ಏರ್ಪಡಿಸಲಾಗಿದ್ದ ಛಾಯಾಚಿತ್ರ ಪ್ರದರ್ಶನ, ಪ್ರಚಾರ ಸಾಮಗ್ರಿಗಳ ಪ್ರದರ್ಶನ ಹಾಗೂ ವ್ಯಂಗ್ರಚಿತ್ರ ರಚನೆ ಕಾರ್ಯಾಗಾರದಲ್ಲಿ ವ್ಯಂಗ್ಯಚಿತ್ರಕಾರರ ಕೈಚಳಕ ಮತದಾರರು ಮುಂದಿನ ಚುನಾವಣೆಯಲ್ಲಿ ಮತಗಟ್ಟೆಗೆ ತೆರಳಿ ಮತಚಲಾಯಿಸಲು ಪ್ರೇರೇಪಿಸುವಂತಿತ್ತು. ಮತದಾನದ ಮಹತ್ವ, ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸುವ ಅಗತ್ಯವನ್ನು ಈ ವ್ಯಂಗ್ಯಚಿತ್ರಗಳು ಬಿಂಬಿಸಿದವು.